8
ಎಜ್ರನೊಂದಿಗೆ ಹಿಂದಿರುಗಿದ ಕುಟುಂಬಗಳ ನಾಯಕರು
ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಬಾಬಿಲೋನಿನಿಂದ ನನ್ನ ಸಂಗಡ ಹೊರಟು ಬಂದವರ ಕುಟುಂಬಗಳಲ್ಲಿ ಮುಖ್ಯಸ್ಥರು ಯಾರೆಂದರೆ:
 
ಫೀನೆಹಾಸನ ವಂಶಜರಲ್ಲಿ
ಗೇರ್ಷೋಮನೂ,
ಈತಾಮಾರನ ವಂಶಜರಲ್ಲಿ
ದಾನಿಯೇಲನೂ;
ದಾವೀದನ ವಂಶಜರಲ್ಲಿ
ಹಟ್ಟೂಷನೂ. ಇವನು ಶೆಕನ್ಯನ ವಂಶಜನು.
ಪರೋಷಿನ ವಂಶಜರಲ್ಲಿ
ಜೆಕರ್ಯನೂ, ಅವನ ಸಂಗಡ ವಂಶಜರಲ್ಲಿ 150 ಮಂದಿ ಗಂಡಸರು.
ಪಹತ್ ಮೋವಾಬನ ವಂಶಜರಲ್ಲಿ
ಜೆರಹ್ಯನ ಮಗನಾದ ಎಲಿಹೋಯೇನೈನೂ, ಅವನ ಸಂಗಡ 200 ಮಂದಿ ಗಂಡಸರು.
ಜತ್ತುವಿನ ವಂಶಜರಲ್ಲಿ
ಯಹಜಿಯೇಲನ ಮಗನಾದ ಶೆಕನ್ಯನು ಮತ್ತು ಅವನ ಸಂಗಡ 300 ಮಂದಿ ಗಂಡಸರು.
ಅದೀನನ ವಂಶಜರಲ್ಲಿ
ಯೋನಾತಾನನ ಮಗ ಏಬೆದನೂ, ಅವನ ಸಂಗಡ 50 ಮಂದಿ ಗಂಡಸರು.
ಏಲಾಮನ ವಂಶಜರಲ್ಲಿ
ಅತಲ್ಯನ ಮಗ ಯೆಶಾಯನೂ, ಅವನ ಸಂಗಡ 70 ಮಂದಿ ಗಂಡಸರು.
ಶೆಫಟ್ಯನ ವಂಶಜರಲ್ಲಿ
ಮೀಕಾಯೇಲನ ಮಗ ಜೆಬದ್ಯನೂ, ಅವನ ಸಂಗಡ 80 ಮಂದಿ ಗಂಡಸರು.
ಯೋವಾಬನ ವಂಶಜರಲ್ಲಿ
ಯೆಹೀಯೇಲನ ಮಗ ಓಬದ್ಯನೂ, ಅವನ ಸಂಗಡ 218 ಮಂದಿ ಗಂಡಸರು.
10 ಬಾನೀಯ ವಂಶಜರಲ್ಲಿ
ಯೋಸಿಫ್ಯನ ಮಗ ಶೆಲೋಮೀತನು ಮತ್ತು ಅವನ ಸಂಗಡ 160 ಮಂದಿ ಗಂಡಸರು.
11 ಬೇಬೈನ ವಂಶಜರಲ್ಲಿ
ಬೆಬಾಯಿಯ ಮಗ ಜೆಕರ್ಯನು; ಅವನ ಸಂಗಡ 28 ಮಂದಿ ಗಂಡಸರು.
12 ಅಜ್ಗಾದನ ವಂಶಜರಲ್ಲಿ
ಹಕ್ಕಾಟಾನನ ಮಗ ಯೋಹಾನಾನನೂ, ಅವನ ಸಂಗಡ 110 ಮಂದಿ ಗಂಡಸರು;
13 ಅದೋನೀಕಾಮಿನ ವಂಶಜರಲ್ಲಿ
ಕಡೇ ಪುತ್ರರಾದ ಎಲೀಫೆಲೆಟ್, ಯೆವಿಯೇಲನು, ಶೆಮಾಯನು ಎಂಬ ಹೆಸರುಳ್ಳವರೂ, ಅವರ ಸಂಗಡ 60 ಮಂದಿ ಗಂಡಸರು;
14 ಬಿಗ್ವೈ ವಂಶಜರಲ್ಲಿ
ಜಕ್ಕೂರನ ಮಗನಾದ ಊತೈ ಮತ್ತು ಅವನ ಸಂಗಡ 70 ಮಂದಿ ಗಂಡಸರು.
ಯೆರೂಸಲೇಮಿಗೆ ಹಿಂದಿರುಗಿ ಬಂದದ್ದು
15 ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು, ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ, ಯಾಜಕರನ್ನೂ ಶೋಧಿಸಿ ನೋಡುವಾಗ, ಲೇವಿಯರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ. 16 ಆಗ ನಾನು ಎಲೀಯೆಜೆರನು, ಅರೀಯೇಲನು, ಶೆಮಾಯನು, ಎಲ್ನತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ, ಯೋಯಾರೀಬನು, ಎಲ್ನತಾನನು ಎಂಬ ಗ್ರಹಿಕೆಯುಳ್ಳವರನ್ನೂ ಕರೆಕಳುಹಿಸಿದೆನು. 17 ಕಾಸಿಫ್ಯದಲ್ಲಿರುವ ಅಧಿಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ, ಅವರು ನಮ್ಮ ದೇವರ ಆಲಯಕ್ಕೋಸ್ಕರ ಸೇವಕರನ್ನು ತರುವ ಹಾಗೆ ಅವರು ಕಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ, ಅವನ ಸಹೋದರರಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು. 18 ನಮ್ಮ ದೇವರ ಕೃಪಾಹಸ್ತವು ನಮ್ಮ ಮೇಲೆ ಇದ್ದುದರಿಂದ, ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗ ಮಹ್ಲೀಯ ಪುತ್ರರಲ್ಲಿ ಬುದ್ಧಿವಂತನಾದ ಶೇರೇಬ್ಯನೂ, ಅವನ ಪುತ್ರರೂ, ಸಹೋದರರೂ ಆದ ಹದಿನೆಂಟು ಮಂದಿಯನ್ನೂ, 19 ಹಷಬ್ಯನೂ, ಅವನ ಸಂಗಡ ಮೆರಾರೀಯ ಪುತ್ರರಲ್ಲಿ ಯೆಶಾಯನೂ, ಅವನ ಸಹೋದರರೂ, ಅವರ ಪುತ್ರರೂ ಆದ ಇಪ್ಪತ್ತು ಮಂದಿಯನ್ನೂ, 20 ದಾವೀದನೂ, ಪ್ರಧಾನರೂ, ಲೇವಿಯರನ್ನು ಸೇವಿಸುವುದಕ್ಕೆ ನೇಮಿಸಿದ ದೇವಾಲಯದ ಸೇವಕರಲ್ಲಿ ಇನ್ನೂರ ಇಪ್ಪತ್ತು ಮಂದಿ ಸೇವಕರನ್ನೂ, ನಮ್ಮ ಬಳಿಗೆ ಕರೆದುಕೊಂಡು ಬಂದರು. ಅವರೆಲ್ಲರ ಹೆಸರುಗಳು ದಾಖಲೆಯಾಗಿದ್ದವು.
21 ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು. 22 “ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು. 23 ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.
24 ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೇರೇಬ್ಯ, ಹಷಬ್ಯ ಇವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ 25 ಅರಸನೂ, ಅವನ ಸಲಹೆಗಾರರೂ, ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ, ಬಂಗಾರವನ್ನೂ, ಸಲಕರಣೆಗಳನ್ನೂ ಅವರಿಗೆ ತೂಕಮಾಡಿ ಕೊಟ್ಟೆನು. 26 ಅವರ ಕೈಗೆ ಕೊಟ್ಟ ಸಲಕರಣೆಗಳ ತೂಕ 22 ಬೆಳ್ಳಿ ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಗ್ರಿಗಳ ತೂಕ 3.4 ಮೆಟ್ರಿಕ್ ಟನ್; ಬಂಗಾರ 3.4 ಮೆಟ್ರಿಕ್ ಟನ್. 27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8.4 ಕಿಲೋಗ್ರಾಂ, ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.
28 ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ. 29 ನೀವು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ, ಪ್ರಧಾನರ ಮುಂದೆಯೂ ಇಸ್ರಾಯೇಲ್ ಕುಟುಂಬಗಳ ಪ್ರಧಾನರ ಮುಂದೆಯೂ ತೂಕಮಾಡುವವರೆಗೆ ಜಾಗ್ರತೆಯಾಗಿ ಕಾಪಾಡಿರಿ,” ಎಂದೆನು. 30 ಹಾಗೆಯೇ ಯಾಜಕರೂ, ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ, ಬಂಗಾರವನ್ನೂ, ವಸ್ತುಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.
31 ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು. 32 ನಾವು ಯೆರೂಸಲೇಮಿಗೆ ಬಂದು, ಅಲ್ಲಿ ಮೂರು ದಿವಸ ವಿಶ್ರಮಿಸಿಕೊಂಡೆವು.
33 ತರುವಾಯ ನಾಲ್ಕನೆಯ ದಿವಸದಲ್ಲಿ ಆ ಬೆಳ್ಳಿಯೂ, ಬಂಗಾರವೂ, ಸಲಕರಣೆಗಳೂ ನಮ್ಮ ದೇವರ ಆಲಯದಲ್ಲಿ ಯಾಜಕರಾಗಿರುವ ಊರೀಯನ ಮಗ ಮೆರೇಮೋತನ ಕೈಯಿಂದ ತೂಕಮಾಡಿ ಕೊಟ್ಟೆವು. ಅವನ ಸಂಗಡ ಲೇವಿಯರಾದ ಫೀನೆಹಾಸನ ಮಗನಾಗಿರುವ ಎಲಿಯಾಜರನೂ, ಯೇಷೂವನ ಮಗ ಯೋಜಾಬಾದನೂ, ಬಿನ್ನೂಯ್ ಮಗ ನೋವದ್ಯನೂ ಇದ್ದರು. 34 ಅದರದರ ಲೆಕ್ಕದ ಪ್ರಕಾರವೂ, ತೂಕದ ಪ್ರಕಾರವೂ ಎಲ್ಲವುಗಳ ತೂಕವು ತಕ್ಷಣವೇ ಲಿಖಿತವಾಯಿತು.
35 ಸೆರೆಯಿಂದ ಮರಳಿ ಬಂದವರು ಇಸ್ರಾಯೇಲ್ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲರಿಗೋಸ್ಕರ ಹನ್ನೆರಡು ಹೋರಿಗಳನ್ನೂ, ತೊಂಬತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ದೋಷಪರಿಹಾರಕ್ಕಾಗಿ ಹನ್ನೆರಡು ಹೋತಗಳನ್ನೂ ಅರ್ಪಿಸಿದರು. ಇವೆಲ್ಲಾ ಯೆಹೋವ ದೇವರಿಗೆ ದಹನಬಲಿಯಾಗಿತ್ತು. 36 ಅವರು ಅರಸನ ಆಜ್ಞೆಗಳನ್ನು ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ, ಯಜಮಾನರಿಗೂ ಒಪ್ಪಿಸಿದರು. ಆಗ ಅವರು ಜನರಿಗೂ, ದೇವರ ಆಲಯಕ್ಕೂ ಸಹಾಯ ಮಾಡಿದರು.